ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಇಮೇಜ್
ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದೀಕ್ಷಾ ರಜತ ಮಹೋತ್ಸವ ಜುಲೈ 20 ರಂದು ಗುರುಪೀಠದ ಆವರಣದಲ್ಲಿ ನಡೆಯಲಿದೆ ಎಂದು ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ತಿಳಿಸಿದರು... ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವವರು ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೃತಿ ಬಿಡುಗಡೆ ಮಾಡುವವರು ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವರಾದ ಶಿವರಾಜ್ ತಂಗಡಗಿ ಅಧ್ಯಕ್ಷತೆ ವಹಿಸುವವರು ,ಮಂತ್ರಾಲಯದ ಸುಭುಧೇಂದ್ರ ತೀರ್ಥರು ಹಾಗೂ ನಾಡಿನ ಮಠಾಧೀಶರು ಹಾಗೂ ಶಾಸಕರು ಭಾಗವಹಿಸುವವರು... ಸುಮಾರು 2‌ ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನೀರಿಕ್ಷೆ ಇದೆ...ತಾವೆಲ್ಲ ಭೋವಿ ಸಮಾಜದವರು ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಭೋವಿ ಸಮಾಜ ಮುಖಂ ಡ ಪವನ್ ಕುಮಾರ್ ಶಿರ್ವ ಅವರು ಮಾಧ್ಯಮದ ಮುಖಾಂತರ ವಿನಂತಿ ಮಾಡಿದರು

ಅರಕಲಗೂಡು: ಮಲ್ಲಿಪಟ್ಟಣ ಗ್ರಾ.ಪಂ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ನೇತೃತ್ವದಲ್ಲಿ ಸಭೆ.

ಇಮೇಜ್
ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಪಂ ವತಿಯಿಂದ ಗ್ರಾಮಸಭೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ವಿವಿಧ ಸವಲತ್ತುಗಳನ್ನು ಕೋರಿ ಅರ್ಜಿ ಸಲ್ಲಿಸಿದರು. ಮಲ್ಲಿಪಟ್ಟಣದಲ್ಲಿ ಗ್ರಾಪಂ ವಾಣಿಜ್ಯ ಮಳಿಗೆಗಳ ಹರಾಜು ನಡೆಸಿ ಹಲವಾರು ವರ್ಷಗಳೇ ಕಳೆದಿದೆ. ಕೆಲವರು ಮಳಿಗೆಗಳನ್ನು ಹೆಚ್ಚು ಬಾಡಿಗೆ ವಸೂಲಿ ಮಾಡಿ ಪಂಚಾಯಿತಿ ಕಡಿಮೆ ಬಾಡಿಗೆ ಹಣ ಪಾವತಿಸುತ್ತಿದ್ದಾರೆ. ಇದರಿಂದ ಪಂಚಾಯಿತಿಗೆ ಬರಬೇಕಾದ ಲಾಭ ಕೈತಪ್ಪುತ್ತಿದೆ. ಮಳಿಗೆಗಳ ಮರು ಹರಾಜು ನಡೆಸಬೇಕು ಎಂದು ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದರು. ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮಾತನಾಡಿ, ಕಳೆದ ಬಾರಿ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿತ್ತು. ಕರೊನಾ ಕಾರಣದಿಂದಾಗ ಮಳಿಗಳ ವರ್ತಕರು ವ್ಯಾಪಾರವಾಗದೆ ನಷ್ಟದಲ್ಲಿದ್ದ ಕಾರಣ ಹರಾಜು ನಡೆಸುವುದನ್ನು ಕೈ ಬಿಡಲಾಯಿತು. ಮುಖ್ಯ ರಸ್ತೆಯ ಕೊಡ್ಲಿಪೇಟೆ ಇಲ್ಲವೇ ಶನಿವಾರ ಸಂತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಲಿದೆ. ಇಂದಿಗೂ ಯಾವ ಮಾರ್ಗದಲ್ಲಿ ಹೈವೆ ಮಾರ್ಗ ನಿರ್ಮಾಣವಾಗಲಿದೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ರಸ್ತೆ ನಿರ್ಮಾಣವಾದರೆ ಮಳಿಗೆಗಳನ್ನು ತೆರವುಗೊಳಿಸಬೇಕಾಗುತ್ತದೆ. ಹೀಗಾಗಿ ಹರಾಜು ನಡೆಸಲು ಸಾಧ್ಯವಾಗಿಲ್ಲ. ಈ ಕುರಿತು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು. ತೋಟಗಾರಿಕೆ ಇಲಾಖೆ ಅಧಿಕಾರಿ ಧನಂಜಯ ಮಾತನಾಡಿ, ಕೇಂದ್ರ ಮತ್

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಇಮೇಜ್
ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ  ಬೆನ್ನಲ್ಲೆ ಬಿಜೆಪಿ ಅರಕಲಗೂಡು ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹೆಚ್.ಯೋಗಾರಮೇಶ್ ಆಪ್ತರ ತಂಡ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಬೇಟಿ ಮಾಡಿ ಮಾತನಾಡಿದ್ದು ಹೆಚ್.ಯೋಗಾರಮೇಶ್ ಅವರು ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಜಿಲ್ಲೆಯಾಧ್ಯಂತ ಸಂಘಟನೆ ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಆದ್ದರಿಂದ ಪಕ್ಷಕ್ಕೆ ಯಾರೇ ಬಂದರೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್  ಹೆಚ್.ಯೋಗಾರಮೇಶ್ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಪೂರಕವಾಗಿ ಸ್ಪಂದಿಸಿದ್ದು ಯೋಗಾರಮೇಶ್ ಅವರಿಗೆ ಅನ್ಯಾಯ ಆಗಲ್ಲ. ಪಕ್ಷ ಎಲ್ಲವನ್ನು ಗಮನಿಸುತ್ತಿದೆ.  ಯೋಗಾರಮೇಶ್ ಅವರ ಶ್ರಮ   ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ಅಂಬೇಡ್ಕರ್‌ಗೆ ಗೌರವ ತಂದುಕೊಟ್ಟ ಏಕೈಕಾ ಪ್ರಧಾನಿ ನರೇಂದ್ರಮೋದಿ, ದಲಿತರು ಬಿಜೆಪಿಯನ್ನು ಬೆಂಬಲಿಸಿ : ಕೆ.ಶಿವರಾಮ್ ಮನವಿ.

ಇಮೇಜ್
ಅಂಬೇಡ್ಕರ್‌ಗೆ ಗೌರವ  ತಂದುಕೊಟ್ಟ ಏಕೈಕಾ ಪ್ರಧಾನಿ ನರೇಂದ್ರಮೋದಿ, ದಲಿತರು ಬಿಜೆಪಿಯನ್ನು ಬೆಂಬಲಿಸಿ : ಕೆ.ಶಿವರಾಮ್ ಮನವಿ. ಅರಕಲಗೂಡು  : ಸ್ವಾತಂತ್ರö್ಯ ಭಾರತದಲ್ಲಿ ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಗೌರವ  ತಂದುಕೊಟ್ಟ ಏಕೈಕಾ ಪ್ರಧಾನಿ ಹೆಮ್ಮೆಯ ನರೇಂದ್ರಮೋದಿಜೀ ಆಗಿದ್ದು,ದಲಿತ ಸಮಾಜದವರು ಬಿಜೆಪಿ ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ರಾಜ್ಯ ಬಿಜೆಪಿ ಮುಖಂಡ ಕೆ.ಶಿವರಾಮ್ ಮನವಿ ಮಾಡಿದರು. ಪಟ್ಟಣದ ಶ್ರೀಗುರು ವಿಜಯಸಿದ್ದ ಶಿವದೇವಾ ಮಂಗಳ ಮಂದಿರ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಎಸ್‌ಸಿ,ಎಸ್ಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಪರಿಶಿಷ್ಟರಿಗೆ ನಿಜವಾದ ದೇವರು ಅಂಬೇಡ್ಕರ್ ಆಗಿದ್ದಾರೆ.ನಮ್ಮ ಆರಾಧ್ಯ ದೇವ ಅವರೇ ಆಗಿದ್ದಾರೆ.ಈ ಇತಿಹಾಸದಲ್ಲಿ ನಾವು ಎಷ್ಟು ಕಷ್ಟ ಕಾರ್ಪಣ್ಯಗಳನ್ನು ಎದುರಿಸಿದ್ದೇವೆ.ಬಾಬಾ ಸಾಹೇಬರಿಗೆ ಯಾರು ಗೌರವ ಕೊಡುತ್ತಾರೋ ಅವರಿಗೆ ನಮ್ಮ ಬೆಂಬಲ ಕೊಡಬೇಕಿದೆ.ಮೋದಿ ಅವರ ಸರಕಾರ ಬಂದ ಮೇಲೆ ದೇಹಲಿಯಲ್ಲಿ ಅಂಬೇಡ್ಕರ್ ಅವರ ಹೆಸರಿನಲ್ಲಿ ಅಂರರಾಷ್ಟಿçÃಯ ಕೇಂದ್ರ ಸ್ಥಾಪನೆ.ಅಂಬೇಡ್ಕರ್ ಅವರ ಸಮಾಧಿ,ವಾಸ ಮಾಡಿದ ಸ್ಥಳ,ದೀಕ್ಷಾ ಭೂಮಿ,ಸಂವಿಧಾನ ಬರೆದ ಸ್ಥಳ,ಓದಿದ ಸ್ಥಳವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ.೬೦ವರ್ಷ ಸರಕಾರ ಮಾಡಿದ ಕಾಂಗ್ರೆಸ್‌ಗೆ ಯಾಕೆ ಈ ಸ್ಥಳಗಳನ್ನು ಅಭಿವೃದ್ಧಿಗೊಳಿಸ

ಅರಕಲಗೂಡು ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ರಸ್ತೆಗೆ‌ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮದ ಮಹಿಳೆಯರು.

ಇಮೇಜ್
ಅರಕಲಗೂಡು ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ರಸ್ತೆಗೆ‌ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮದ ಮಹಿಳೆಯರು. ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ವಡ್ಡರಹಳ್ಳಿ ಇಂದ ಭೈರಾಪುರ, ನೇರಲಹಳ್ಳಿ ಮತ್ತು ಇತರೆ ಗ್ರಾಮಗಳು ಹಾಗೂ ವಡ್ಡರಹಳ್ಳಿ ಗ್ರಾಮದವರ ತೋಟ ಮತ್ತು ಹೊಲ ಗದ್ದೆಗಳಿಗೆ  ಸಂಪರ್ಕ ಕಲ್ಪಿಸುವ ಗೊರೂರು ಬಲದಂಡೆ ನಾಲೆ ಏರಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ತಡೆಗೋಡೆಯೂ ಇಲ್ಲದೇ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಹಾಗೂ ಬಲದಂಡೆ ನಾಲೆಯಲ್ಲಿ ಉತ್ತಮವಾಗಿದ್ದ ಸೋಪಾನ ಕಟ್ಟೆ ಕಲ್ಲುಗಳನ್ನು ಕಿತ್ತು ಕಳಪೆ ರೀತಿಯಲ್ಲಿ ಅವೈಜ್ಞಾನಿಕವಾಗಿ ಸೋಪಾನ ಕಟ್ಟೆ ನಿರ್ಮಾಣ ಮಾಡಿದ್ದಾರೆ. ಗ್ರಾಮಸ್ಥರು ಬಟ್ಟೆ ಒಗೆಯಲು ತುಂಬಾ ತೋದರೆ ಆಗುತ್ತಿದೆ. ಅಲ್ಲದೇ ರಸ್ತೆಯಲ್ಲಿ ಓಡಾಡಲು ತೊಂದರೆ ಆಗುತ್ತಿದೆ ಎಂದು ವಡ್ಡರಹಳ್ಳಿ ಗ್ರಾಮಸ್ಥರು ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.  ಹಲವು ಬಾರಿ ಶಾಸಕರಿಗೆ ಮನವಿ ಮಾಡಿದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಲಕ್ಷಾಂತರ ಹಣ ಖರ್ಚು ಮಾಡಿ ನಾಲೆ ಅಭಿವೃದ್ಧಿ ಮಾಡಲಾಗಿದೆ. ಕಳಪೆ ಕಾಮಗಾರಿ ಮಾಡುವ ಮೂಲಕ  ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗಿದೆ. ಕೂಡಲೇ ಶಾಸಕ ಎ.ಟಿ.ರಾಮಸ್ವಾಮಿ ಅವರು ಗಮನ ಹರಿಸಿ ಸಮಸ್ಯೆ ಬಗೆಹಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಗ್ರಾಮಸ್ಥರೊಂದಿಗೆ ಜೊತೆಗೂಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಸ್ಥಳದಲ್ಲಿ ಮಾ

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.

ಇಮೇಜ್
ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು. ಎ.ಟಿ.ರಾಮಸ್ವಾಮಿ ಮಾತನಾಡಿ ಕೋವಿಡ್ -೧೯ ಸೊಂಕಿನಿಂದ ಚಿಕಿತ್ಸೆ ಪಲಕಾರಿಯಾಗದೇ ಮೃತಪಟ್ಟ ತಾಲ್ಲೂಕಿನ 44 ಕುಟುಂಬದ ವಾರಸುದಾರರಿಗೆ 44 ಲಕ್ಷದ ಚೆಕ್ ಗಳನ್ನು ಸರ್ಕಾರದ ವತಿಯಿಂದ  ನೀಡಲಾಗುತ್ತಿದೆ‌. ನೆನ್ನೆ ಅಸೆಂಬ್ಲಿ ಮುಗಿಯಿತು. ಮಲಗೋದು ರಾತ್ರಿ ಒಂದು ಗಂಟೆ ಆಗಿದೆ , ರಜಾ ದಿನವಾದ ಇಂದು ಸಹ ಕೆಲಸ ಮಾಡಬೇಕು ಹಣಕ್ಕಿಂತ ಕಾಲಕ್ಕೆ ಹೆಚ್ಚಿನ ಮಹತ್ವ ಕೊಟ್ಟು ನೊಂದ ಕುಟುಂಬಕ್ಕೆ ನೆರವಾಗಬೇಕು ಎಂದು ರಜಾ ದಿನವಾದ ಇಂದು ಸಹ ಕಾರ್ಯಕ್ರಮ ಇಟ್ಟುಕೊಂಡು ಚೆಕ್ ವಿತರಿಸಲಾಗುತ್ತಿದೆ. ನೆನ್ನೆ  ಸದನದಲ್ಲಿ ಇದ್ದಾಗ ನನ್ನ ಸ್ನೇಹಿತರು ಹೇಳಿದ್ರು ಇಂತಹ ಕಾಲದಲ್ಲಿ ನಿಮ್ಮಂತಹ ರಾಜಕಾರಣಿಗಳು ಆಯ್ಕೆಯಾಗುವುದು ಹೆಮ್ಮೆಯ ವಿಷಯ ಎಂದರು. ಈ ಹೆಮ್ಮೆ ನನಗಲ್ಲ, ನನ್ನನ್ನು ಆಯ್ಕೆ ಮಾಡಿದ ಜನರಿಗೆ ಈ ಮಹತ್ವ ಸಲ್ಲಬೇಕು ಎಂದಿದ್ದೇನೆ ಎಂದರು.  ಜನ ತಾಲ್ಲೂಕು ಕಛೇರಿಗೆ ಅಲೆದು ಅಲೆದು ಜನ ಸುಸ್ತು ಆಗಿದ್ದಾರೆ. ಕಂದಾಯ ಅದಾಲತ್ ಮಾಡಿ, ಸಣ್ಣ ಪುಟ್ಟ ಕೆಲಸಕ್ಕೆ ಜನರನ್ನು ಅಲೆಯದ ಹಾಗೆ ಮಾಡಿ ಆಗ ಜನ ನಿಮ್ಮನ್ನು ಪೂಜ್ಯ ಭಾವನೆಯಿಂದ ನೋಡುತ್ತಾರೆ. ಎಂದು ತಹಶಿಲ್ದಾರ್ ಅವರಿಗೆ ಕಿವಿಮಾತು ಹೇಳಿದರು. ಬೇರೆಯವರಿಗೆ ಅರಕಲಗೂಡು ತಾಲ್ಲೂಕು  ಮಾದರಿ ತಾಲ್ಲೂಕು

ಹಾಸನ:MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ

ಇಮೇಜ್
ಅರಕಲಗೂಡು: ನಾಳೆ ಬಿಜೆಪಿ ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ. MLC  ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ  ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರಿಕಾಗೋಷ್ಠಿಯಲ್ಲಿ ಹೆಚ್.ಯೋಗಾರಮೇಶ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್ ಕಟೀಲ್‌ ನೇತೃತ್ವದಲ್ಲಿ, ಹಾಗೂ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರವಿಕುಮಾರ್, ಜಿಲ್ಲಾಧ್ಯಕ್ಷರಾದ ಸುರೇಶ್ ಉಲ್ಲಹಳ್ಳಿ ಹಾಗೂ ಕಾರ್ಯಕರ್ತರ  ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷವನ್ನು ಬಲಪಡಿಸಬೇಕು ಎಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದು  ಹಾಸನ ಜಿಲ್ಲೆಯ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕಿದೆ ಈ ನಿಟ್ಟಿನಲ್ಲಿ ನಾಳೆ ಸಭೆ ನಡೆಯಲಿದೆ. ಗ್ರಾಮಗಳ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರದ ನರೇಂದ್ರ ಮೋದಿ ಸರ್ಕಾರ ಗ್ರಾಮ ಪಂಚಾಯತಿಯನ್ನು ಸದೃಢ ಮಾಡಬೇಕು ಎಂದು ಗ್ರಾಮ ಪಂಚಾಯಿತಿಗೆ ಅತಿ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ಭಾರತೀಯ ಜನತಾ ಪಾರ್ಟಿ ಬೆಂಬಲಿಸಬೇಕಿದೆ. ಈ ದೃಷ್ಟಿಯಿಂದ ಗ್ರಾಮ ಪಂಚಾಯತಿ ಸದಸ್ಯರಲ್ಲಿ ಮನವಿ ಮಾಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಅರಕಲಗೂಡು ತಾಲ್ಲೂಕಿನಿಂದ ಬಿಜೆಪಿ ಬೆಂಬಲಿತ ಅ