ಪೋಸ್ಟ್‌ಗಳು

ಫೆಬ್ರವರಿ, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಆಲೂಗಡ್ಡೆ ಮಂಡಳಿ ಸ್ಥಾಪಿಸುವಂತೆ ಸರ್ಕಾರಕ್ಕೆ ಹೆಚ್.ಯೋಗಾರಮೇಶ್ ಒತ್ತಾಯ

ಇಮೇಜ್
ಹಾಸನ: ರಾಜ್ಯದಲ್ಲೇ ಶೇ. 50 ಆಲೂಗೆಡ್ಡೆ ಬೆಳೆಯುವ ಹಾಸನ ಜಿಲ್ಲೆಯಲ್ಲಿ ಆಲೂಗೆಡ್ಡೆ ಮಂಡಳಿ ಸ್ಥಾಪಿಸಿ, ಅದಕ್ಕೆ ಈ ಬಾರಿಯ ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡುವಂತೆ ಪೊಟಾಟೋ ಕ್ಲಬ್ ಅಧ್ಯಕ್ಷ ಯೋಗಾರಮೇಶ್ ಒತ್ತಾಯಿಸಿದರು.  ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಮೂಲಕ ಜಿಲ್ಲೆಯ ಆಲೂಗೆಡ್ಡೆ ಬೆಳೆಗಾರರಿಗೆ ರಾಜ್ಯ ಸರ್ಕಾರ ನೆರವಾಗಬೇಕು ಎಂದು ಮನವಿ ಮಾಡಿದರು. ಈಗಾಗಲೇ ಕಾಫಿ, ತಂಬಾಕು ಮತ್ತು ತೆಂಗು ಮಂಡಳಿ ತೆರೆಯಲಾಗಿದೆ. ಅದರಂತೆ ಆಲೂಗೆಡ್ಡೆ ಅಭಿವೃದ್ಧಿಗೂ ಮಂಡಳಿ ರಚನೆ ಮಾಡಬೇಕು ಎಂದು ಯೋಗಾ ರಮೇಶ್ ಒತ್ತಾಯಿಸಿದರು. ಆಲೂಗೆಡ್ಡೆ ಮಂಡಳಿ ಸ್ಥಾಪನೆಯಿಂದ ಸ್ಥಳೀಯ ಆಲೂಗೆಡ್ಡೆಯನ್ನೇ ಬಿತ್ತನೆ ಬೀಜ ಎಂದು ಮಾರಾಟ ಮಾಡುವ ಅಕ್ರಮಕ್ಕೆ ಬ್ರೇಕ್ ಬೀಳಲಿದೆ ಎಂದರು. ಹಾಸನ ಜಿಲ್ಲೆ ಸೇರಿದಂತೆ ಆಲೂಗೆಡ್ಡೆ ಬೆಳೆಯುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಮೊದಲಾದ ಜಿಲ್ಲೆಗಳಲಿ ಆಲೂಗೆಡ್ಡೆ ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ  ಆಲೂಗೆಡ್ಡೆ ಬೆಳೆಗಾರರಿಗೆ ಸಬ್ಸಿಡಿ ದರದಲಿ ದೃಢೀಕೃತ ಬಿತ್ತನೆ ಬೀಜ ನೀಡುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು. ಇದೇ ಜಿಲ್ಲೆಯ ಹಲವು ಕಡೆಗಳಲ್ಲಿ ಮಿತಿ ಮೀರಿರುವ ಕಾಡಾನೆ ಸಮಸ್ಯೆಗೆ ಕಡಿವಾಣ ಹಾಕುವ ಕೆಲಸ ತುರ್ತಾಗಿ ಆಗಬೇಕಿದೆ. ವಿಷಯದಲ್ಲಿ ಪಕ್ಷ ರಾಜಕೀಯ ಬೇಡ. ಕಳೆದ ಹಲವು ದಶಕಗಳಿಂದ ಮಲೆನಾಡು ಭಾಗದ ಜನರನ್ನು ಕಾಡುತ್ತಿರುವ ಜನರ