ಅರಕಲಗೂಡು: ಮಲ್ಲಿಪಟ್ಟಣ ಗ್ರಾ.ಪಂ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ನೇತೃತ್ವದಲ್ಲಿ ಸಭೆ.

ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಪಂ ವತಿಯಿಂದ ಗ್ರಾಮಸಭೆ ಹಮ್ಮಿಕೊಳ್ಳಲಾಗಿತ್ತು.
ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ವಿವಿಧ ಸವಲತ್ತುಗಳನ್ನು ಕೋರಿ ಅರ್ಜಿ ಸಲ್ಲಿಸಿದರು.
ಮಲ್ಲಿಪಟ್ಟಣದಲ್ಲಿ ಗ್ರಾಪಂ ವಾಣಿಜ್ಯ ಮಳಿಗೆಗಳ ಹರಾಜು ನಡೆಸಿ ಹಲವಾರು ವರ್ಷಗಳೇ ಕಳೆದಿದೆ. ಕೆಲವರು ಮಳಿಗೆಗಳನ್ನು ಹೆಚ್ಚು ಬಾಡಿಗೆ ವಸೂಲಿ ಮಾಡಿ ಪಂಚಾಯಿತಿ ಕಡಿಮೆ ಬಾಡಿಗೆ ಹಣ ಪಾವತಿಸುತ್ತಿದ್ದಾರೆ. ಇದರಿಂದ ಪಂಚಾಯಿತಿಗೆ ಬರಬೇಕಾದ ಲಾಭ ಕೈತಪ್ಪುತ್ತಿದೆ. ಮಳಿಗೆಗಳ ಮರು ಹರಾಜು ನಡೆಸಬೇಕು ಎಂದು ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದರು.
ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮಾತನಾಡಿ, ಕಳೆದ ಬಾರಿ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿತ್ತು. ಕರೊನಾ ಕಾರಣದಿಂದಾಗ ಮಳಿಗಳ ವರ್ತಕರು ವ್ಯಾಪಾರವಾಗದೆ ನಷ್ಟದಲ್ಲಿದ್ದ ಕಾರಣ ಹರಾಜು ನಡೆಸುವುದನ್ನು ಕೈ ಬಿಡಲಾಯಿತು. ಮುಖ್ಯ ರಸ್ತೆಯ ಕೊಡ್ಲಿಪೇಟೆ ಇಲ್ಲವೇ ಶನಿವಾರ ಸಂತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಲಿದೆ. ಇಂದಿಗೂ ಯಾವ ಮಾರ್ಗದಲ್ಲಿ ಹೈವೆ ಮಾರ್ಗ ನಿರ್ಮಾಣವಾಗಲಿದೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ರಸ್ತೆ ನಿರ್ಮಾಣವಾದರೆ ಮಳಿಗೆಗಳನ್ನು ತೆರವುಗೊಳಿಸಬೇಕಾಗುತ್ತದೆ. ಹೀಗಾಗಿ ಹರಾಜು ನಡೆಸಲು ಸಾಧ್ಯವಾಗಿಲ್ಲ. ಈ ಕುರಿತು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
ತೋಟಗಾರಿಕೆ ಇಲಾಖೆ ಅಧಿಕಾರಿ ಧನಂಜಯ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ತಾಳೆ ಬೆಳೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ರೈತರು ಅಡಿಕೆ ಬೆಳೆ ಜತೆಗೆ ತಾಳೆ ಬೆಳೆದರೆ ಲಾಭದಾಯಕವಾಗಲಿದೆ ಎಂದರು.
ತಾಪಂ ಯೋಜನಾಧಿಕಾರಿ ಧರ್ಮೇಂದ್ರ ಅಧ್ಯಕ್ಷತೆ ವಹಿಸಿದ್ದರು. ರೇಷ್ಮೆ ಇಲಾಖೆ ಅಧಿಕಾರಿ ಹರೀಶ್, ಪಿಡಿಒ ಅರುಣ್ ಕುಮಾರ್ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ಸುಮಿತ್ರಮ್ಮ, ಲಕ್ಷ್ಮಮ್ಮ, ಯಶೋಧಮ್ಮ, ಪ್ರಕಾಶ್, ಯೋಗೇಶ್, ಕಾಂತರಾಜು, ಚಂದ್ರೇಗೌಡ, ಪೂಜಾ, ಲಲಿತ, ಜಯಲಕ್ಷ್ಮೀ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಚಂದ್ರಕಲಾ, ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಶೃತಿ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವಶಂಕರ್, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೌಶಿಕ್, ತಾಲೂಕು ಆರೋಗ್ಯ ಅಮೃತ ಅಭಿಯಾನ ಯೋಜನೆ ಸಂಯೋಜಕ ಚಂದ್ರಶೇಖರ್ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಥೂ.. ನಿಮ್ ಯೋಗ್ಯತೆಗಿಷ್ಟು ಬೆಂಕಿ ಹಾಕ. ಸಚಿವ ಸುದಾಕರ್ ಗೆ ಮಹಿಳಾ ಛೀಮಾರಿ.