ಪೋಸ್ಟ್‌ಗಳು

ಅರಕಲಗೂಡು ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಅಂಬೇಡ್ಕರ್‌ಗೆ ಗೌರವ ತಂದುಕೊಟ್ಟ ಏಕೈಕಾ ಪ್ರಧಾನಿ ನರೇಂದ್ರಮೋದಿ, ದಲಿತರು ಬಿಜೆಪಿಯನ್ನು ಬೆಂಬಲಿಸಿ : ಕೆ.ಶಿವರಾಮ್ ಮನವಿ.

ಇಮೇಜ್
ಅಂಬೇಡ್ಕರ್‌ಗೆ ಗೌರವ  ತಂದುಕೊಟ್ಟ ಏಕೈಕಾ ಪ್ರಧಾನಿ ನರೇಂದ್ರಮೋದಿ, ದಲಿತರು ಬಿಜೆಪಿಯನ್ನು ಬೆಂಬಲಿಸಿ : ಕೆ.ಶಿವರಾಮ್ ಮನವಿ. ಅರಕಲಗೂಡು  : ಸ್ವಾತಂತ್ರö್ಯ ಭಾರತದಲ್ಲಿ ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಗೌರವ  ತಂದುಕೊಟ್ಟ ಏಕೈಕಾ ಪ್ರಧಾನಿ ಹೆಮ್ಮೆಯ ನರೇಂದ್ರಮೋದಿಜೀ ಆಗಿದ್ದು,ದಲಿತ ಸಮಾಜದವರು ಬಿಜೆಪಿ ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ರಾಜ್ಯ ಬಿಜೆಪಿ ಮುಖಂಡ ಕೆ.ಶಿವರಾಮ್ ಮನವಿ ಮಾಡಿದರು. ಪಟ್ಟಣದ ಶ್ರೀಗುರು ವಿಜಯಸಿದ್ದ ಶಿವದೇವಾ ಮಂಗಳ ಮಂದಿರ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಎಸ್‌ಸಿ,ಎಸ್ಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಪರಿಶಿಷ್ಟರಿಗೆ ನಿಜವಾದ ದೇವರು ಅಂಬೇಡ್ಕರ್ ಆಗಿದ್ದಾರೆ.ನಮ್ಮ ಆರಾಧ್ಯ ದೇವ ಅವರೇ ಆಗಿದ್ದಾರೆ.ಈ ಇತಿಹಾಸದಲ್ಲಿ ನಾವು ಎಷ್ಟು ಕಷ್ಟ ಕಾರ್ಪಣ್ಯಗಳನ್ನು ಎದುರಿಸಿದ್ದೇವೆ.ಬಾಬಾ ಸಾಹೇಬರಿಗೆ ಯಾರು ಗೌರವ ಕೊಡುತ್ತಾರೋ ಅವರಿಗೆ ನಮ್ಮ ಬೆಂಬಲ ಕೊಡಬೇಕಿದೆ.ಮೋದಿ ಅವರ ಸರಕಾರ ಬಂದ ಮೇಲೆ ದೇಹಲಿಯಲ್ಲಿ ಅಂಬೇಡ್ಕರ್ ಅವರ ಹೆಸರಿನಲ್ಲಿ ಅಂರರಾಷ್ಟಿçÃಯ ಕೇಂದ್ರ ಸ್ಥಾಪನೆ.ಅಂಬೇಡ್ಕರ್ ಅವರ ಸಮಾಧಿ,ವಾಸ ಮಾಡಿದ ಸ್ಥಳ,ದೀಕ್ಷಾ ಭೂಮಿ,ಸಂವಿಧಾನ ಬರೆದ ಸ್ಥಳ,ಓದಿದ ಸ್ಥಳವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ.೬೦ವರ್ಷ ಸರಕಾರ ಮಾಡಿದ ಕಾಂಗ್ರೆಸ್‌ಗೆ ಯಾಕೆ ಈ ಸ್ಥಳಗಳನ್ನು ಅಭಿವೃದ್ಧಿಗೊಳಿಸ

ಅರಕಲಗೂಡು ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ರಸ್ತೆಗೆ‌ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮದ ಮಹಿಳೆಯರು.

ಇಮೇಜ್
ಅರಕಲಗೂಡು ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ರಸ್ತೆಗೆ‌ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮದ ಮಹಿಳೆಯರು. ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ವಡ್ಡರಹಳ್ಳಿ ಇಂದ ಭೈರಾಪುರ, ನೇರಲಹಳ್ಳಿ ಮತ್ತು ಇತರೆ ಗ್ರಾಮಗಳು ಹಾಗೂ ವಡ್ಡರಹಳ್ಳಿ ಗ್ರಾಮದವರ ತೋಟ ಮತ್ತು ಹೊಲ ಗದ್ದೆಗಳಿಗೆ  ಸಂಪರ್ಕ ಕಲ್ಪಿಸುವ ಗೊರೂರು ಬಲದಂಡೆ ನಾಲೆ ಏರಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ತಡೆಗೋಡೆಯೂ ಇಲ್ಲದೇ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಹಾಗೂ ಬಲದಂಡೆ ನಾಲೆಯಲ್ಲಿ ಉತ್ತಮವಾಗಿದ್ದ ಸೋಪಾನ ಕಟ್ಟೆ ಕಲ್ಲುಗಳನ್ನು ಕಿತ್ತು ಕಳಪೆ ರೀತಿಯಲ್ಲಿ ಅವೈಜ್ಞಾನಿಕವಾಗಿ ಸೋಪಾನ ಕಟ್ಟೆ ನಿರ್ಮಾಣ ಮಾಡಿದ್ದಾರೆ. ಗ್ರಾಮಸ್ಥರು ಬಟ್ಟೆ ಒಗೆಯಲು ತುಂಬಾ ತೋದರೆ ಆಗುತ್ತಿದೆ. ಅಲ್ಲದೇ ರಸ್ತೆಯಲ್ಲಿ ಓಡಾಡಲು ತೊಂದರೆ ಆಗುತ್ತಿದೆ ಎಂದು ವಡ್ಡರಹಳ್ಳಿ ಗ್ರಾಮಸ್ಥರು ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.  ಹಲವು ಬಾರಿ ಶಾಸಕರಿಗೆ ಮನವಿ ಮಾಡಿದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಲಕ್ಷಾಂತರ ಹಣ ಖರ್ಚು ಮಾಡಿ ನಾಲೆ ಅಭಿವೃದ್ಧಿ ಮಾಡಲಾಗಿದೆ. ಕಳಪೆ ಕಾಮಗಾರಿ ಮಾಡುವ ಮೂಲಕ  ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗಿದೆ. ಕೂಡಲೇ ಶಾಸಕ ಎ.ಟಿ.ರಾಮಸ್ವಾಮಿ ಅವರು ಗಮನ ಹರಿಸಿ ಸಮಸ್ಯೆ ಬಗೆಹಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಗ್ರಾಮಸ್ಥರೊಂದಿಗೆ ಜೊತೆಗೂಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಸ್ಥಳದಲ್ಲಿ ಮಾ

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.

ಇಮೇಜ್
ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು. ಎ.ಟಿ.ರಾಮಸ್ವಾಮಿ ಮಾತನಾಡಿ ಕೋವಿಡ್ -೧೯ ಸೊಂಕಿನಿಂದ ಚಿಕಿತ್ಸೆ ಪಲಕಾರಿಯಾಗದೇ ಮೃತಪಟ್ಟ ತಾಲ್ಲೂಕಿನ 44 ಕುಟುಂಬದ ವಾರಸುದಾರರಿಗೆ 44 ಲಕ್ಷದ ಚೆಕ್ ಗಳನ್ನು ಸರ್ಕಾರದ ವತಿಯಿಂದ  ನೀಡಲಾಗುತ್ತಿದೆ‌. ನೆನ್ನೆ ಅಸೆಂಬ್ಲಿ ಮುಗಿಯಿತು. ಮಲಗೋದು ರಾತ್ರಿ ಒಂದು ಗಂಟೆ ಆಗಿದೆ , ರಜಾ ದಿನವಾದ ಇಂದು ಸಹ ಕೆಲಸ ಮಾಡಬೇಕು ಹಣಕ್ಕಿಂತ ಕಾಲಕ್ಕೆ ಹೆಚ್ಚಿನ ಮಹತ್ವ ಕೊಟ್ಟು ನೊಂದ ಕುಟುಂಬಕ್ಕೆ ನೆರವಾಗಬೇಕು ಎಂದು ರಜಾ ದಿನವಾದ ಇಂದು ಸಹ ಕಾರ್ಯಕ್ರಮ ಇಟ್ಟುಕೊಂಡು ಚೆಕ್ ವಿತರಿಸಲಾಗುತ್ತಿದೆ. ನೆನ್ನೆ  ಸದನದಲ್ಲಿ ಇದ್ದಾಗ ನನ್ನ ಸ್ನೇಹಿತರು ಹೇಳಿದ್ರು ಇಂತಹ ಕಾಲದಲ್ಲಿ ನಿಮ್ಮಂತಹ ರಾಜಕಾರಣಿಗಳು ಆಯ್ಕೆಯಾಗುವುದು ಹೆಮ್ಮೆಯ ವಿಷಯ ಎಂದರು. ಈ ಹೆಮ್ಮೆ ನನಗಲ್ಲ, ನನ್ನನ್ನು ಆಯ್ಕೆ ಮಾಡಿದ ಜನರಿಗೆ ಈ ಮಹತ್ವ ಸಲ್ಲಬೇಕು ಎಂದಿದ್ದೇನೆ ಎಂದರು.  ಜನ ತಾಲ್ಲೂಕು ಕಛೇರಿಗೆ ಅಲೆದು ಅಲೆದು ಜನ ಸುಸ್ತು ಆಗಿದ್ದಾರೆ. ಕಂದಾಯ ಅದಾಲತ್ ಮಾಡಿ, ಸಣ್ಣ ಪುಟ್ಟ ಕೆಲಸಕ್ಕೆ ಜನರನ್ನು ಅಲೆಯದ ಹಾಗೆ ಮಾಡಿ ಆಗ ಜನ ನಿಮ್ಮನ್ನು ಪೂಜ್ಯ ಭಾವನೆಯಿಂದ ನೋಡುತ್ತಾರೆ. ಎಂದು ತಹಶಿಲ್ದಾರ್ ಅವರಿಗೆ ಕಿವಿಮಾತು ಹೇಳಿದರು. ಬೇರೆಯವರಿಗೆ ಅರಕಲಗೂಡು ತಾಲ್ಲೂಕು  ಮಾದರಿ ತಾಲ್ಲೂಕು

ಅರಕಲಗೂಡು: ಜಾನುವಾರುಗಳ ಸಾವು ಖಂಡಿಸಿ ಪೊಟ್ಯಾಟೋ ಕ್ಲಬ್ ವತಿಯಿಂದ ಪಶು ಆಸ್ಪತ್ರೆ ಮುಂಬಾಗ ಪ್ರತಿಭಟನೆ.

ಇಮೇಜ್
ಅರಕಲಗೂಡು: ಪಟ್ಟಣದ ಪಶು ಆಸ್ಪತ್ರೆ ಮುಂಭಾಗ ಪೊಟ್ಯಾಟೋ ಕ್ಲಬ್ ನೇತೃತ್ವದಲ್ಲಿ ಜಾನುವಾರುಗಳ ಸಾವು ಖಂಡಿಸಿ ಶುಕ್ರವಾರ ರೈತರು ಪ್ರತಿಭಟನೆ ನಡೆಸಿದರು. ಯೋಗಾ ರಮೇಶ್ ಮಾತನಾಡಿ, ಜನಪ್ರತಿನಿಧಿಗಳು ನಿರ್ಲಕ್ಷö್ಯ ಧೋರಣೆಯಿಂದಾಗಿ ಜಾನುವಾರುಗಳಿಗೆ ರೋಗದ ತೀವ್ರತೆ ಹೆಚ್ಚಿ ಗಬ್ಬದ ಹಸು, ಕರುಗಳು ನರಳಿ ನರಳಿ ಪ್ರಾಣ ಕಳೆದುಕೊಳ್ಳುತ್ತಿವೆ. ಲಸಿಕೆ ನೀಡಿ ಜಾನುವಾರುಗಳ ಜೀವ ಉಳಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಕಾಲು ಬಾಯಿ ರೋಗ ಜಾನುವಾರುಗಳಿಗೆ ಮರಣ ಶಾಸನವಾಗಿ ಪರಿಣಮಿಸಿದೆ. ಸ್ಕಿನ್ ಕಾಯಿಲೆ ಕೂಡ ಉಲ್ಭಣಿಸಿದೆ. ಇದಕ್ಕೆ ಔಷಧಿಯೇ ಇಲ್ಲವಂತೆ, ಆಧುನಿಕ ತಂತ್ರಜ್ಞಾನದ ಕಾಲದಲ್ಲೂ ಲಸಿಕೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಇತರೆ ವಿಚಾರಗಳ ಕುರಿತು ಚರ್ಚೆ ಮಾಡುವ ಶಾಸಕರು, ಸಚಿವರು ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಮೂಕರಾಗಿದ್ದಾರೆ. ಕೂಡಲೇ ಮೃತಪಟ್ಟ ಜಾನುವಾರುಗಳ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಬೇಕು. ಹಳ್ಳಿಗಳಲ್ಲಿ ಸಾಮೂಹಿಕ ಲಸಿಕೆ ಕೈಗೊಂಡು ರೋಗ ನಿಯಂತ್ರಿಸಬೇಕು. ಪಶು ವೈದ್ಯರ ಕೊರತೆ ನೀಗಿಸಿ ಜಾನುವಾರುಗಳಿಗೆ ಗುಣಮಟ್ಟದ ಚಿಕಿತ್ಸಾತ್ಮಕ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ಹೈನುಗಾರಿಕೆಯನ್ನೆ ನೆಚ್ಚಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದೇವೆ. ಇತ್ತ ಶುಂಠಿ, ಆಲೂಗಡ್ಡೆ ಕಟಾವು ನಡೆಸಿ ಮಾರಾಟ ಮಾಡಿದರೂ ಬೆಲೆ ಕುಸಿದು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದೇವೆ, ಅತ್ತ ಮನೆ ಕ

ಶುಂಠಿಗೆ 1500/- ಬೆಂಬಲ ಬೆಲ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಹೆಚ್ ಯೋಗಾರಮೇಶ್.

ಇಮೇಜ್
ಇಂದು ಅರಕಲಗೂಡು ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಹೆಚ್ ಯೋಗಾರಮೇಶ್ ನೇತೃತ್ವದ ತಂಡ ಹಾಸನ ಜಿಲ್ಲಾಧಿಕಾರಿ ಆರ್ ಗೀರೀಶ್ ಅವರನ್ನು ಬೇಟಿ ಮಾಡಿ ಶುಂಠಿ ಮತ್ತು ಆಲೂಗಡ್ಡೆ  ಬೆಲೆ ಕುಸಿದಿದ್ದು ಶುಂಠಿ 60Kg ಚೀಲಕ್ಕೆ ಕನಿಷ್ಟ 1500/-  ಸೂಕ್ತ ಬೆಂಬಲ‌ ಬೆಲೆಯನ್ನು ಸರ್ಕಾರ ತಕ್ಷಣವೇ ಘೋಷಣೆ ಮಾಡುವಂತೆ ಸರ್ಕಾರಕ್ಕೆ ವರದಿ ನೀಡಬೇಕು.    ಹಾಗೂ ರೈತರು ಬೆಳೆದ ಶುಂಠಿ ಮತ್ತು ಆಲೂಗಡ್ಡೆ ಬೆಳೆ ಹಾಳಾಗಿದ್ದು ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ, ಶುಂಠಿ ಮತ್ತು ಆಲೂಗಡ್ಡೆ ಬೆಳೆ ನಷ್ಟ ಆಗಿರುವ ಬಗ್ಗೆ ಅಧಿಕಾರಿಗಳಿಂದ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ  ಸೂಕ್ತ ಬೆಳೆ ನಷ್ಟ  ಪರಿಹಾರವನ್ನು ನೀಡುವಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಮುಂದಿನ ದಿನಗಳಲ್ಲಿ ದೃಢೀಕೃತ ಬಿತ್ತನೆ ಬೀಜದ ಶುಂಠಿಯನ್ನು ಸರ್ಕಾರದ ವತಿಯಿಂದಲೇ ಸಿದ್ದಪಡಿಸಿ ರೈತರಿಗೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಿ ಮನವಿ ಮಾಡಲಾಯಿತು.  ಇದಕ್ಕೆ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಸ್ಪಂದಿಸಿದ್ದು ಕೂಡಲೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದ್ದಾರೆ. ವರದಿ: ರಘು ಅರಕಲಗೂಡು

ನಾಲೆಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ‌ ನೀಡಿದ ಶಾಸಕ ಎ.ಟಿ.ರಾಮಸ್ವಾಮಿ

ಇಮೇಜ್
ನಾಲೆಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ  ಎ.ಟಿ.ರಾಮಸ್ವಾಮಿ ಅರಕಲಗೂಡು:  ಹೇಮಾವತಿ ಜಲಾಶಯದಿಂದ  ತಾಲೂಕಿನ ಬಲ ಮೇಲ್ದಂಡೆ  ನಾಲೆಗೆ ನೀರು ಹರಿಸುವ ಕಾರ್ಯಕ್ಕೆ ಕ್ಷೇತ್ರ ಶಾಸಕರಾದ ಎ.ಟಿ.ರಾಮಸ್ವಾಮಿ ಶನಿವಾರ  ಚಾಲನೆ ನೀಡಿದರು.   ಇದೆ ಸಂದರ್ಭದಲ್ಲಿ ಮಾತನಾಡಿದ ಶಾಸಕರು , ಈ ಬಾರಿ ಜಲಾಶಯದಲ್ಲಿ ನೀರು ಸಂಗ್ರಹ  ಉತ್ತಮವಾಗಿರುವ ಕಾರಣ ಮುಂಚಿತವಾಗಿಯೆ ನಾಲೆಗಳಿಗೆ ನೀರು ಹರಿಸಲಾಗಿದೆ,  ಕಳೆದ ಮೂರು  ವರ್ಷಗಳಿಂದ  ಈ ಕ್ರಮ ನಡೆಸಲಾಗುತ್ತಿದೆ.  ಜಲಾಶಯದ  ಎಡ ಮತ್ತು ಬಲ ದಂಡೆ ನಾಲೆಗಳಿಗಿಂತ ಬಲ ಮೇಲ್ದಂಡೆ ನಾಲೆ ಎತ್ತರದಲ್ಲಿದೆ. ಹೀಗಾಗಿ 15 ದಿನ ಮುಂಚಿತವಾಗಿ ಈ ನಾಲೆಯಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.   96.8 ಕಿ ಮೀ ಉದ್ದದ ಬಲ ಮೇಲ್ದಂಡೆ ನಾಲೆಯಲ್ಲಿ  907 ಕ್ಯೂಸೆಕ್ಸ್ ನೀರಿನ ಹರಿವಿನ ಸಾಮರ್ಥ್ಯ  ಇದ್ದು, 56 ಸಾವಿರ  ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ.  6 ಸಾವಿರ  ಎಕರೆ ಭತ್ತದ ಬೆಳೆಗೆ  ಹಾಗೂ 50 ಸಾವಿರ ಎಕರೆಯಲ್ಲಿ ಅರೆ ನೀರಾವರಿ  ಬೆಳೆಗಳಿಗೆ ನಿರೊದಗಿಸುವ ಯೋಜನೆ ರೂಪಿಸಲಾಗಿದೆ.  ನಾಲಾ ವ್ಯಾಪ್ತಿಯಲ್ಲಿ 41 ವಿತರಣಾ ನಾಲೆಗಳು ಇದ್ದು 210 ಕೆರೆಗಳಿವೆ.  ಬಲ ಮೇಲ್ದಂಡೆ ನಾಲಾ ವ್ಯಾಪ್ತಿಯಲ್ಲಿ  146, ಅಡಿಕೆ ಬೊಮ್ಮನಹಳ್ಳಿ ಏತ ನೀರಾವರಿ ಯೋಜನೆಯಲ್ಲಿ 25,ಅಲ್ಲಾ ಪಟ್ಟಣ ಏತ ನೀರಾವರಿ ಯೋಜನೆಯಲ್ಲಿ 7,ಹಳ್ಳಿ ಮೈಸೂರು ಏತನೀರಾವರಿ ಯೋಜನೆಯಲ್ಲಿ 32 ಕೆರೆಗಳಿದ್ದು ಇವುಗಳನ್ನು  ತು

ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಕಲುಷಿತ ನೀರಿನ ಸರಬರಾಜು ಆರೋಪಿಸಿ ಗ್ರಾಮಸ್ಥರ ಆಕ್ರೋಶ.

ಇಮೇಜ್
ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಕಲುಷಿತ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಕೇಂದ್ರ ಸ್ಥಾನವಾದ ಬಸವಾಪಟ್ಟಣ ಗ್ರಾಮಕ್ಕೆ ಕಾವೇರಿ ನದಿಯಿಂದ ಕಲುಷಿತ ನೀರಿನ ಸರಬರಾಜು  ಕಂಡು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರಿನ ಸರಬರಾಜು ಅವಸ್ಥೆಯನ್ನು ಕಂಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಿಂದ ಸ್ವಲ್ಪ ದೂರದಲ್ಲಿ ಹರಿಯುವ ಕಾವೇರಿ ನದಿಯಿಂದ  ನೀರಿನ ಪೂರೈಕೆ ಮಾಡುವ ಸ್ಥಳವು ಕಲುಷಿತಗೊಂಡಿದ್ದು ಅದೇ ಸ್ಥಳದಿಂದ ನೀರನ್ನು ಪೂರೈಸುತ್ತಿರುವುದು ವಿಷಾದನೀಯ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕನಿಷ್ಟ ಮೂಲಭೂತ ಸೌಲಭ್ಯವನ್ನು ಒದಗಿಸದಿರುವುದು ಗ್ರಾಮ ಪಂಚಾಯಿತಿ ಆಡಳಿತ ವೈಫಲ್ಯಕ್ಕೆ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ ನೀರನ್ನು ಪಂಪ್ ಮಾಡುವ ಸ್ಥಳ ಶಿಥಿಲಗೊಂಡಿದ್ದು ಅಲ್ಲದೆ ಕೊಳಚೆ ಪ್ರದೇಶವಾಗಿದೆ ಇದೇ ಸ್ಥಳದಿಂದ ಗ್ರಾಮಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿದ್ದು  ನಲ್ಲಿಗಳಲ್ಲಿ ಕಲುಷಿತ  ನೀರು ಬರುತ್ತಿರುವುದು ಗೃಹಿಣಿಯರ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಹೊಡೆದು ವರ್ಷದಿಂದ ಗ್ರಾಮದೇವತೆ ದೇವಸ್ಥಾನದ ಹತ್ತಿರ ಇರುವ  ಗದ್ದೆಗಳಲ್ಲಿ ನೀರು ತುಂಬಿಕೊ

ಜನ ಹಿತ ಲಾಕ್ ಡೌನ್ ಬೇಕು.ಹೆಚ್.ಡಿ.ಕುಮಾರಸ್ವಾಮಿ.

ಇಮೇಜ್
ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಹೆಚ್.ಡಿ, ಕುಮಾರಸ್ವಾಮಿ ಹೇಳಿದ್ದಾರೆ. ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ. ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದಿದ್ದಾರೆ. ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹ

ಹತ್ತಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿಗಾಹುತಿ

ಇಮೇಜ್
ಅರಕಲಗೂಡು ಪಟ್ಟಣದ ವಿನಾಯಕ ನಗರದ ಗದ್ದೆ ಹಳ್ಳ ಮುಖ್ಯರಸ್ತೆಯಲ್ಲಿರುವ ಮಂಜುನಾಥ ರವರ ಬಿಲ್ಡಿಂಗ್ ನಲ್ಲಿ ಬಾಡಿಗೆಗೆ ಇದ್ದ ರಿಜ್ವಾನ್ ರವರಿಗೆ ಸೇರಿದ ಹಾಸಿಗೆ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿಗೆ ಆಹುತಿ ಆಗಿದೆ.  ಅಂಗಡಿ ಮಾಲಿಕ ಬೆಳಗ್ಗೆ ಹತ್ತಿ ಅಂಗಡಿ ಬಾಗಿಲು ಹಾಕಿಕೊಂಡು ಸಂಜೆ ಆರು ಗಂಟೆ ವೇಳೆಗೆ ಹೊರಗಡೆ ಹೊಗಿದ್ದಾರೆ. ಸಂಜೆ ಸುಮಾರು 7 ಗಂಟೆಯ ವೇಳೆಗೆ ಹತ್ತಿ ಅಂಗಡಿಯಿಂದ ಹೊಗೆ ಬರುತ್ತಿದ್ದನ್ನು ಕಂಡ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದಾರೆ.  ವಿಷಯ ತಿಳಿದು  ಸ್ಥಳಕ್ಕೆ ಆಗಮಿಸಿದ  ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ. ಅರಕಲಗೂಡು ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ.

ಇಮೇಜ್
ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ. ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಹಂಪಾಪುರ ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳು  20/03/2021 ರಂದು ವಾಸ್ತವ್ಯ ಹೂಡಲಿದ್ದು ಸಾರ್ವಜನಿಕರು ಅವರ ಕುಂದು ಕೊರತೆಗಳ ಅವಹಾಲನ್ನು ಸಲ್ಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ‌ ಸಂಖ್ಯೆಯಲ್ಲಿ  ಸಾರ್ವಜನಿಕರು ಬಂದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅರಕಲಗೂಡು ತಹಶಿಲ್ದಾರರಾದ ವೈ. ಎಂ.ರೇಣುಕುಮಾರ್ ತಿಳಿಸಲಾಗಿದೆ.  ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ. ಸರಕಾರದ ಸೂಚನೆಯ ಮೇರೆಗೆ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ತಾಲ್ಲೂಕಿನ ಒಂದು ಹಳ್ಳಿಯಲ್ಲಿ  ವಾಸ್ತವ್ಯ ಮಾಡಬೇಕು. ಅದರಂತೆ ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಹಂಪಾಪುರ ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳು   20/03/2021 ರಂದು ಗ್ರಾಮ‌ ವಾಸ್ತವ್ಯ ಮಾಡಲಿದ್ದಾರೆ. ಇದಕ್ಕಾಗಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಿತ್ತಿದ್ದಾರೆ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯ ಸಲಕ ಸಿದ್ದತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದ 11 ಗಂಟೆಗಳ ವರೆಗೆ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ  ನಡೆಸಲಿದ್ದು ಸಾರ್ವಜನಿಕರು ಅವರ ಕುಂದು ಕೊರತೆಗಳ ಅವಹಾಲನ್ನು ಸಲ್ಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ‌ ಸಂಖ್ಯೆಯಲ್ಲಿ  ಸಾರ್ವಜನಿಕರು ಬಂದು ಈ ಅವಕಾಶವನ್ನು ಸದ

ಸರ್ಕಾರಿ ಶಾಲೆಗೆ ಚೇರ್ ಗಳನ್ನು ಕೊಡುಗೆಯಾಗಿ ನೀಡಿದ ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಹೆಚ್ ಯೋಗಾರಮೇಶ್

ಇಮೇಜ್
ಅರಕಲಗೂಡು ಪೊಟ್ಯಾಟೋ ಕ್ಲಬ್ ಅಧ್ಯಕ್ಷ ಹೆಚ್ ಯೋಗಾರಮೇಶ್ ಅವರ ತಂದೆ ದಿ|| ಶ್ರೀ ಹೊ.ತಿ. ಹುಚ್ಚಪ್ಪನವರು ದತ್ತು  ಪಡೆದಿದ್ದ ಹೊನ್ನವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಯೋಗಾರಮೇಶ್ ಬೇಟಿ ನೀಡಿ ಶಾಲೆಯ ಬೇಡಿಕೆಗೆ ಸ್ಪಂದಿಸಿ ಮಕ್ಕಳು ಕುಳಿತುಕೊಳ್ಳುವ ಚೇರ್ ಗಳನ್ನು ಉಚಿತವಾಗಿ ನೀಡುವ ಮೂಲಕ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಹಕಾರಿಯಾಗಿದ್ದಾರೆ. ಯೋಗಾರಮೇಶ್ ಅವರು ಅರಕಲಗೂಡಿನಲ್ಲಿ ಪೊಟ್ಯಾಟೋ ಕ್ಲಬ್ ಸ್ಥಾಪಿಸಿ ರೈತಪರ ಕೆಲಸಗಳನ್ನು ಮಾಡುತ್ತಾ ಬಂದಿದ್ದು ಈಗ ಇಂತಹ ಸಮಾಜ ಸೇವಾ ಕೆಲಸಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.  ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಣ್ಣನಿಂಗಯ್ಯ, ಶಾಲಾ ಶಿಕ್ಷಕರಾದ ಲತಾಮಣಿ, ಲೀಲಾ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಿಂಗರಾಜು ಮುಖಂಡರಾದ ರಾಜೇಗೌಡರು, ಪ್ರಕಾಶ್, ಗೋಪಾಲ್, ಮೋಹನ್ ಹಾಗೂ ಗ್ರಾಮಸ್ಥರು ಜೊತೆಯಲ್ಲಿ ಇದ್ದರು.

ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಹಾಗೂ ನೂತನ ಕೆಪಿಸಿಸಿ ಸದಸ್ಯ ಹೆಚ್.ಟಿ.ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ಮುಖಂಡರಿಂದ ಪತ್ರಿಕಾಗೋಷ್ಠಿ.

ಇಮೇಜ್
ಅರಕಲಗೂಡು ತಾಲ್ಲೂಕಿಗೆ ಬ್ಲಾಕ್ ಕಾಂಗ್ರೆಸ್ ನ ಕೆಪಿಸಿಸಿ ಸದಸ್ಯರಾಗಿ ಆಯ್ಕೆಯಾದ  ಹೆಚ್.ಟಿ. ಮಂಜುನಾಥ್ ಮಾತನಾಡಿ ನಾನು  ನನ್ನನ್ನು ಆಯ್ಕೆ ಮಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಹಾಗೂ ಕೆಪಿಸಿಸಿ ಸದಸ್ಯರಾಗಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ನಂತರ ಮಾತನಾಡಿ ನಾನು ಆಯ್ಕೆಯಾಗಿ ಕಾಂಗ್ರೆಸ್ ಪಕ್ಷದ ಬಲವರ್ಧನೆ ಗಾಗಿ ಹೋರಾಟ ಮಾಡಿ , ಸಂಘಟನೆ ಮಾಡಿ ವಿರೋಧ ಪಕ್ಷದ ಲೋಪ ದೋಶಗಳನ್ನು ಎತ್ತಿ ಹಿಡಿದು ಪಕ್ಷ ಸಂಘಟನೆ ಮಾಡುವಂತೆ ರಾಜ್ಯ ನಾಯಕರು ಸೂಚಿಸಿದ್ದಾರೆ . ಅದರಂತೆಯೇ ತಾಲ್ಲೂಕಿನಲ್ಲಿ ಕೆಲಸ ಮಾಡುತ್ತೇನೆ. ಸದ್ಯಕ್ಕೆ ನರೇಂದ್ರ ಮೋದಿ ಸರ್ಕಾರ ಎಪಿಎಂಸಿ ಕಾಯ್ದೆ ಜಾರಿಮಾಡಿ ರೈತರನ್ನು ಬೀದಿಗೆ ತಂದಿದೆ.  ಮೂರು ನಾಲ್ಕು ತಿಂಗಳಿಂದ ರೈರರು  ಬೀದಿಯಲ್ಲಿ ಹೋರಾಟ ಮಾಡಿ  ನೂರಾರು ರೈತರು ಇದರಿಂದ ಜೀವ ಕಳೆದುಕೊಂಡಿದ್ದಾರೆ. ಆದರೂ ಸಹ ಕೇಂದ್ರ ಸರ್ಕಾರ ತಮಗೆ ಸಂಭಂಧವೇ ಇಲ್ಲ ಎಂಬಂತೆ ಬೇಜವಬ್ದಾರಿ ತೋರಿಸುತ್ತಿದೆ. ಇನ್ನೊಂದೆಡೆ ಪೆಟ್ರೋಲ್ ಡೀಸೆಲ್ , ಗ್ಯಾಸ್ ಏರಿಕೆಯಂದ ಜನ ಕಂಗಾಲಾಗಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಉಳಿದ ಎಲ್ಲಾ ವಸ್ತುಗಳ ಬೆಲೆ ಏರತೊಡಗಿದೆ. ಇದರಿಂದ ಜನ ಸಾಮಾನ್ಯರ ಬದುಕು ಕಷ್ಟದ ಸ್ಥಿತಿಗೆ ಬಂದಿದೆ. ಇಂತಹ ವಿಷಯಗಳ ಬಗ್ಗೆ ಪ್ರತಿಭಟನೆ ಮಾಡುವ‌ ಮೂಲಕ‌ ಪಕ್ಷ‌ ಸಂಘಟನೆಯ ಕೆಲಸದಲ್ಲಿ ನಿರಂತರವಾಗಿ ಕೆಲಸ‌ ಮಾಡುವುದಾಗಿ ಹೇಳಿದರು.

ಅರಕಲಗೂಡು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬ್ಲಾಕ್ ಕಾಂಗ್ರೆಸ್ ನ ನೂತನ ಕೆಪಿಸಿಸಿ ಸದಸ್ಯರಾಗಿ ಹೆಚ್.ಟಿ. ಮಂಜುನಾಥ್ ನೇಮಕ

ಇಮೇಜ್
ಅರಕಲಗೂಡು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್‌ ನ ಕೆಪಿಸಿಸಿ ನೂತನ ಸದಸ್ಯರಾಗಿ  ಹೆಂಟಿಗೆರೆ ಕೊಪ್ಪಲು ತಿಮ್ಮೇಗೌಡರ ಮಗ  ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ನೇಮಕ ಮಾಡಿದ್ದಾರೆ.  ಮಂಜುನಾಥ್ ಅವರು ಹುಟ್ಟು ರಾಜಕೀಯ ಕುಟುಂಬದಿಂದ ಬಂದವರಾಗಿದ್ದು ಇವರ ತಂದೆ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿದ್ದರು. ಮಂಜುನಾಥ್ ಅವರಿಗೆ  ಅರಕಲಗೂಡು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದ್ದು ಮುಂದಿನ ದಿನಗಳಲ್ಲಿ ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಅನ್ನು ಬಲವರ್ಧನೆ ಮಾಡುವ  ಮಾಡುವ ಗುರಿ ಹೊಂದಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರಿಗೆ ಹಾಸನ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ನ ಮಾರ್ಗದರ್ಶನದಲ್ಲಿ ಅರಕಲಗೂಡು ತಾಲ್ಲೂಕಿನ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ. 

ಆಲೂಗಡ್ಡೆ ಮಂಡಳಿ ಸ್ಥಾಪಿಸುವಂತೆ ಸರ್ಕಾರಕ್ಕೆ ಹೆಚ್.ಯೋಗಾರಮೇಶ್ ಒತ್ತಾಯ

ಇಮೇಜ್
ಹಾಸನ: ರಾಜ್ಯದಲ್ಲೇ ಶೇ. 50 ಆಲೂಗೆಡ್ಡೆ ಬೆಳೆಯುವ ಹಾಸನ ಜಿಲ್ಲೆಯಲ್ಲಿ ಆಲೂಗೆಡ್ಡೆ ಮಂಡಳಿ ಸ್ಥಾಪಿಸಿ, ಅದಕ್ಕೆ ಈ ಬಾರಿಯ ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡುವಂತೆ ಪೊಟಾಟೋ ಕ್ಲಬ್ ಅಧ್ಯಕ್ಷ ಯೋಗಾರಮೇಶ್ ಒತ್ತಾಯಿಸಿದರು.  ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಮೂಲಕ ಜಿಲ್ಲೆಯ ಆಲೂಗೆಡ್ಡೆ ಬೆಳೆಗಾರರಿಗೆ ರಾಜ್ಯ ಸರ್ಕಾರ ನೆರವಾಗಬೇಕು ಎಂದು ಮನವಿ ಮಾಡಿದರು. ಈಗಾಗಲೇ ಕಾಫಿ, ತಂಬಾಕು ಮತ್ತು ತೆಂಗು ಮಂಡಳಿ ತೆರೆಯಲಾಗಿದೆ. ಅದರಂತೆ ಆಲೂಗೆಡ್ಡೆ ಅಭಿವೃದ್ಧಿಗೂ ಮಂಡಳಿ ರಚನೆ ಮಾಡಬೇಕು ಎಂದು ಯೋಗಾ ರಮೇಶ್ ಒತ್ತಾಯಿಸಿದರು. ಆಲೂಗೆಡ್ಡೆ ಮಂಡಳಿ ಸ್ಥಾಪನೆಯಿಂದ ಸ್ಥಳೀಯ ಆಲೂಗೆಡ್ಡೆಯನ್ನೇ ಬಿತ್ತನೆ ಬೀಜ ಎಂದು ಮಾರಾಟ ಮಾಡುವ ಅಕ್ರಮಕ್ಕೆ ಬ್ರೇಕ್ ಬೀಳಲಿದೆ ಎಂದರು. ಹಾಸನ ಜಿಲ್ಲೆ ಸೇರಿದಂತೆ ಆಲೂಗೆಡ್ಡೆ ಬೆಳೆಯುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಮೊದಲಾದ ಜಿಲ್ಲೆಗಳಲಿ ಆಲೂಗೆಡ್ಡೆ ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ  ಆಲೂಗೆಡ್ಡೆ ಬೆಳೆಗಾರರಿಗೆ ಸಬ್ಸಿಡಿ ದರದಲಿ ದೃಢೀಕೃತ ಬಿತ್ತನೆ ಬೀಜ ನೀಡುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು. ಇದೇ ಜಿಲ್ಲೆಯ ಹಲವು ಕಡೆಗಳಲ್ಲಿ ಮಿತಿ ಮೀರಿರುವ ಕಾಡಾನೆ ಸಮಸ್ಯೆಗೆ ಕಡಿವಾಣ ಹಾಕುವ ಕೆಲಸ ತುರ್ತಾಗಿ ಆಗಬೇಕಿದೆ. ವಿಷಯದಲ್ಲಿ ಪಕ್ಷ ರಾಜಕೀಯ ಬೇಡ. ಕಳೆದ ಹಲವು ದಶಕಗಳಿಂದ ಮಲೆನಾಡು ಭಾಗದ ಜನರನ್ನು ಕಾಡುತ್ತಿರುವ ಜನರ

ಅರಕಲಗೂಡು ಪೋಲೀಸರ ಯಶಸ್ವಿ ಕಾರ್ಯಾಚರಣೆ. 1.5 ಲಕ್ಷ ಬೆಲೆ ಬಾಳುವ 15 ಕುರಿ ಹಾಗೂ 4 ಟಗರು ಕಳ್ಳನ ಬಂದನ

ಇಮೇಜ್
ಅರಕಲಗೂಡು ಪೋಲೀಸರ ಯಶಸ್ವಿ ಕಾರ್ಯಾಚರಣೆ. 1.5 ಲಕ್ಷ ಬೆಲೆ ಬಾಳುವ 15 ಕುರಿ ಹಾಗೂ 4 ಟಗರು ಕಳ್ಳನ ಬಂದನ. ಅರಕಲಗೂಡು ಪಟ್ಟಣದ ಅಸ್ಲಂ ಪಾಷ ಎಂಬುವರು ಅರಕಲಗೂಡು ಬೈಪಾಸ್ ರಸ್ತೆಯ ಉರ್ದು ಶಾಲೆಯ ಹಿಂಬಾಗ ಕುರಿ ಹಾಗೂ ಟಗರುಗಳನ್ನು ಶೆಡ್ ಮುಂಬಾಗ ಮೇಯಲು ಬಿಟ್ಟಿದ್ದು ಕೆಲಸದ ನಿಮಿತ್ತ ಸ್ವಲ್ಪ ಸಮಯ ಹೊರಗಡೆ ಹೋಗಿದ್ದಾರೆ‌ . ಹೊಂಚು ಹಾಕಿ ಕಾದು ಕುಳಿತ್ತದ್ದ ಕಳ್ಳ ಇದನ್ನೆ ಅವಕಾಶ‌ ಮಾಡಿಕೊಂಡು ಎಲ್ಲಾ 15 ಕುರಿಗಳು ಹಾಗೂ 4 ಟಗರುಗಳನ್ನು ದಿನಾಂಕ 20/08/2020 ರಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು.  ಅಸ್ಲಂಪಾಷ ಅವರ ದೂರಿನ ಅನ್ವಯ ಆರೋಪಿಯ ಪತ್ತೆಗಾಗಿ ಅರಕಲಗೂಡು ಪೊಲೀಸರು ಬಲೆ ಬೀಸಿ ಕಳವು ಮಾಡಿದ್ದ ಆರೋಪಿತರ ಪತ್ತೆ ಬಗ್ಗೆ ವಿಶೇಷ ತಂಡ ರಚಿಸಿ ಈ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಆರೋಪಿತರ ಪತ್ತೆಗಾಗಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಶ್ರೀನಿವಾಸಗೌಡ ಐಪಿಎಸ್.ರವರು ವಿಶೇಷ ತಂಡವನ್ನು ರಚಿಸಿದ್ದು, ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ನಂದಿನಿರವರು ಮತ್ತು ಹೊಳೆನರಸೀಪುರ ಉಪ ವಿಭಾಗದ ಉಪಾಧೀಕ್ಷಕರಾದ ಶ್ರೀ ಲಕ್ಷ್ಮೇಗೌಡರವರ ಮಾರ್ಗದರ್ಶನದಲ್ಲಿ ಅರಕಲಗೂಡು ವೃತ್ತದ ಸಿಪಿಐ ಶ್ರೀ ಎಂ.ಕೆ. ದೀಪಕ್ ರವರ ಮೇಲುಸ್ತುವಾರಿಯಲ್ಲಿ ಅರಕಲಗೂಡು ಪೊಲೀಸ್ ಠಾಣೆ ಪಿಎಸ್‌ಐ ಶ್ರೀ ವಿಜಯಕೃಷ್ಣ ರವರ ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ಆರೋಪಿಯ ಬಗ್ಗೆ ಮಾಹಿ

ತಂಬಾಕು ಮನೆಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಮನೆ

ಇಮೇಜ್
ರಾಮನಾಥಪುರ ಹೋಬಳಿಯ ಮಲ್ಲಾಪುರ ಊರಿನ ತಂಬಾಕು  ಬ್ಯಾರನ್ ಮನೆಗೆ ಆಕಸ್ಮಿಕ ಬೆಂಕಿ . ಮಲ್ಲಾಪುರ ಗ್ರಾಮದ ಮಲ್ಲೇಶ್ ರವರಿಗೆ ಸೇರಿದ ತಂಬಾಕು ಬ್ಯಾರನ್ ಮನೆಗೆ ಹೊಗೇಸಪ್ಪು ಬೇಯಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ  ಮನೆ‌‌ ಸಂಪೂರ್ಣ ಸುಟ್ಟು ಬಸ್ಮವಾಗಿದೆ.  ಹೊಗೆಸೊಪ್ಪು ಬ್ಯಾರನ್ ಮನೆಗೆ ಬೆಂಕಿ ಬಿದ್ದ ಪರಿಣಾಮ ಬೇಯಿಸುತ್ತಿದ್ದ ಹೋಗೆಸಪ್ಪು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಲ್ಲದೇ ತಂಬಾಕು ಮನೆಯಲ್ಲಿದ್ದ ಕಡ್ಡಿ ಫೋಲ್ಸ್ ಹಾಗೂ ಮನೆಯ ಮೇಲ್ಛಾವಣಿಯು ಸಹ ಸಂಪೂರ್ಣವಾಗಿ ಹಾನಿಯಾಗಿದೆ . ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಗಲೇ ಮನೆ ಸಂಪೂರ್ಣವಾಗಿ ಸುಟ್ಟ ಹೋಗಿದೆ. ಇದರಿಂದ ಮಲ್ಲೇಶ್ ಎಂಬುವರಿಗೆ ಸುಮಾರು 6 ರಿಂದ 7 ಲಕ್ಷಗಳಷ್ಟು ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.  ತಂಬಾಕು ಮನೆ ಸುಟ್ಟು ಹೋಗಿದ್ದರಿಂದ ಅಲ್ಪ ಸ್ವಲ್ಪ ಪರಿಹಾರ ಬರುತ್ತದೆ ಆದರೂ ಇದು ಸಂಪೂರ್ಣವಾಗಿ ರೈತರ  ನಷ್ಟವನ್ನು ತುಂಬಲು ಸಾಧ್ಯವಿಲ್ಲ ಎಂಬುದು ನೋವಿನ ಸಂಗತಿ

ಅರಕಲಗೂಡು ಪೇಟೆ ಮಾಚಗೌಡನಹಳ್ಳಿ‌‌ ಬಳಿ ರಸ್ತೆ ಅಪಘಾತ.

ಇಮೇಜ್
ಅರಕಲಗೂಡು ಪೇಟೆ ಮಾಚಗೌಡನಹಳ್ಳಿ ಬಳಿ  ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಸವಾರ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹೆಚ್ಚಿನ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ   ಬೈಕ್ ಸವಾರ‌ ಪ್ರಜ್ಞೆ ತಪ್ಪಿದ್ದಾನೆ. ಅರಕಲಗೂಡು  ಪಟ್ಟಣದಲ್ಲಿ ಇರುವ ಅಂಚೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಂಜುಶೆಟ್ಟಿ‌ ಎಂದು ಗುರುತಿಸಲಾಗಿದೆ. ಅರಕಲಗೂಡು ತಾಲ್ಲೂಕಿನ  ದೊಡ್ಡಮಗ್ಗೆಯ ಗ್ರಾಮದವರು. ಎಂದು ಹೇಳಲಾಗಿದೆ.   ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ   ಮಂಜು ಶೆಟ್ಟಿ ರವರನ್ನು ಹಾಸನ ಜಿಲ್ಲಾಸ್ಪತ್ರೆ ಇಂದ  ರವಾನಿಸಲಾಗಿದೆ. ಮಧ್ಯಾಹ್ನದಿಂದಲೂ ರಸ್ತೆ ಮಧ್ಯದಲ್ಲಿಯೇ ನಿಂತಿದ್ದ ಲಾರಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಪಂಕ್ಚರ್ ಆಗಿದ್ದ ಲಾರಿಯನ್ನು ಮಧ್ಯಾಹ್ನದಿಂದಲೂ ತೆರವುಗೊಳಿಸದೇ ರಸ್ತೆಯಲ್ಲಿ ನಿಲ್ಲಿಸಿಕೊಂಡಿದ್ದ ಎಂದು ಸ್ಥಳಿಯರು ಹೇಳುತ್ತಿದ್ದು ಲಾರಿಯ ಹಿಂಬದಿಯಲ್ಲಿ ಯಾವುದೇ ರೇಡಿಯಂ ಪಲಕ ಹಾಕದೇ ಇದ್ದುದ್ದರಿಂದಲೇ  ರಾತ್ರಿ ಸಮಯದಲ್ಲಿ ನಿಂತಿದ್ದ ಲಾರಿಯನ್ನು ಗುರುತಿಸಲು ಸಾಧ್ಯವಾಗಿಲ್ಲ.  ಆದ್ದರಿಂದಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.  ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಇನ್ನು ಅಪಘಾತಕ್ಕೆ ಸಂಬಂದಿಸಿದಂತೆ ಅರಕಲಗೂಡು ‌ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿರುತ್ತದೆ.